ಮಾಲಿನ್ಯದಿಂದ ಬೆಳ್ಳಂದೂರು ಕೆರೆಯಲ್ಲಿ ಉಂಟಾಗಿರುವ ಬೆಂಕಿ ದುರಂತದ ಬಗ್ಗೆ ಪ್ರಸ್ತಾಪಿಸಿದ ನಮ್ಮ ಬೆಂಗಳೂರು ಫೌಂಡೇಷನ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಪಬ್ಬಿಸೆಟ್ಟಿ, ‘ನಾವೆಲ್ಲರೂ ಒಟ್ಟಾಗಿ ಕೆರೆಗಳನ್ನು ಉಳಿಸಿಕೊಳ್ಳಬೇಕು. ಆಗಮಾತ್ರ ಉದ್ಯಾನ ನಗರಿ ಎಂಬ ಹಿರಿಮೆಯನ್ನು ಕಾಯ್ದುಕೊಳ್ಳಲು ಸಾಧ್ಯ’ ಎಂದರು.