ಕೆರೆಯ ನೀರು ಕಾಲುವೆ ಮೂಲಕ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಲಾರಂಭಿಸಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುತ್ತಿದ್ದೇವೆ. ಕೆರೆಯ ಪಕ್ಕದಲ್ಲೇ ಗ್ರಾಮ ಪಂಚಾಯಿತಿ ಕಚೇರಿ ಇದೆ. ಆದರೆ, ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿ ಹನುಮಂತಯ್ಯ ದೂರಿದರು.