‘ಭಾನುವಾರ ಒಟ್ಟು 23 ಲಕ್ಷ ಹಣ ಸಂಗ್ರಹವಾಗಿದೆ. ಮೂರು ದಿನಗಳಲ್ಲಿ ಸುಮಾರು 85 ಸಾವಿರ ಜನ ಭೇಟಿ ನೀಡಿದ್ದು, ₹36 ಲಕ್ಷ ಸಂಗ್ರಹವಾಗಿದೆ. ಉದ್ಯಾನಕ್ಕೆ ಬರುವವರಿಗೆ ತೊಂದರೆಯಾಗದಂತೆ ಮಣ್ಣಿನ ರಸ್ತೆಗಳಿಗೆ ನೀರು ಸಿಂಪಡಿಸಲಾಯಿತು. ಹೀಗಾಗಿ ದೂಳಿನ ಸಮಸ್ಯೆಯಿರಲಿಲ್ಲ’ ಎಂದು ರಾಜ್ಯ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಂ.ಆರ್. ಚಂದ್ರಶೇಖರ್ ತಿಳಿಸಿದರು.