ಸುಮಾರು 3 ಲಕ್ಷ ಎಕರೆ ಪ್ರದೇಶಕ್ಕೆ 10 ಸಾವಿರ ಕ್ಯೂಸೆಕ್ ನೀರು ಒದಗಿಸುವ ಕಾಲುವೆ ಇದಾಗಿದ್ದು, ಈ ಕಾಲುವೆಯ ಮುಖಾಂತರ ಯಾದಗಿರಿ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ನೀರಾವರಿ ಒದಗಿಸಲಾಗಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಬಹುತೇಕ ರೈತರು ಭತ್ತ ನಾಟಿ ಮಾಡಿದ್ದಾರೆ. ಕಾಲುವೆ ಕುಸಿತದ ಸುದ್ದಿ ರೈತರ ನಿದ್ದೆಗೆಡಿಸಿದೆ. ಕಳೆದ ಮೂರು ವರ್ಷಗಳ ಹಿಂದೆ 2014ರಲ್ಲಿ ಈ ನಾರಾಯಣಪುರ ಎಡದಂಡೆ ಮುಖ್ಯಕಾಲುವೆಯನ್ನು ನವೀಕರಣಗೊಳಿಸಲಾಗಿತ್ತು.