ತುಮಕೂರು: ನಗರದ ಸಿದ್ದಗಂಗಾ ತಾಂತ್ರಿಕ ಕಾಲೇಜಿನ ಬಿರ್ಲಾ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಜಾವಾಣಿ ಕ್ವಿಜ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ತುಮಕೂರಿನ ವಿದ್ಯಾನಿಕೇತನ ಶಾಲೆ-2 ನೇ ತಂಡದ ಅಚ್ಯುತ್ ಶರ್ಮಾ ಹಾಗೂ ಎಂ.ವಿ.ಶ್ರೆಯಸ್ ಅವರು 80 ಅಂಕಗಳನ್ನು ಪಡೆಯುವ ಮೂಲಕ ಬೆಂಗಳೂರಿನಲ್ಲಿ ಜ.24 ರಂದು ನಡೆಯುವ ಅಂತಿಮ ಹಂತದ ಸ್ಪರ್ಧೆಗೆ ಪ್ರವೇಶ ಪಡೆದರು.