ಮೂರು ರಾಜ್ಯಗಳ ಚುನಾವಣೆ ನಡೆಯುವ ಮುನ್ನ ಈಶಾನ್ಯ ರಾಜ್ಯದಲ್ಲಿ ಏರ್ಪಡಿಸಿದ್ದ ಜಾಥಾದಲ್ಲಿ ಪಾಲ್ಗೊಂಡು ಆರ್ಎಸ್ಎಸ್ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದ ಭಾಗವತ್ ಅವರು, 'ಪಾಕಿಸ್ತಾನ ಯಾವಾಗ ಹುಟ್ಟಿತ್ತೋ ಆಗಲೇ ಸಂಘರ್ಷ ಎಂಬುದು ಜನ್ಮತಾಳಿತು. ಭಾರತ ಪಾಕಿಸ್ತಾನದೊಂದಿಗೆ ವೈಮನಸ್ಸನ್ನು ಎಂದೋ ಮರೆತು ಬಿಟ್ಟಿದೆ. ಆದರೆ ಪಾಕಿಸ್ತಾನ ಮುಂದುವರೆಸಿದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.
'ಹಿಂದುತ್ವ ಎನ್ನುವುದು ಪಾಕಿಸ್ತಾನದಿಂದಲೇ ಬಂದಿದೆ. ಭಾರತದ ಪುರಾತನ ನಾಗರಿಕತೆಗಳಾದ ಹರಪ್ಪಾ, ಮೊಹೆಂಜೋದರೋ ಸಂಸ್ಕೃತಿ ಪಾಕಿಸ್ತಾನದ ನೆಲದಲ್ಲೇ ಹುಟ್ಟಿದೆ. ಆದರೂ ಯಾಕೆ ಪಾಕಿಸ್ತಾನ ತನ್ನನ್ನು ಭಾರತ ಎಂದು ಕರೆದುಕೊಳ್ಳಲು ಹಿಂಜರಿಯುತ್ತಿದೆ?' ಎಂದು ಪ್ರಶ್ನಿಸಿದ್ದಾರೆ