ಅರಣ್ಯ ಗುತ್ತಿಗೆದಾರರಾಗಿದ್ದ ಅವರು ಮೂರು ದಶಕಗಳಿಂದ ತಾಲ್ಲೂಕಿನಲ್ಲಿ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದರು. ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1994, 1999 ಮತ್ತು 2004ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 2008ರ ಚುನಾವಣೆಯಲ್ಲಿ ಜಯಗಳಿಸಿ, ತಾಲ್ಲೂಕಿನ ರಾಷ್ಟ್ರೀಯ ಪಕ್ಷದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದರು.