ಈ ಭಾಗದಲ್ಲಿ ಆನೆ ಹಾವಳಿ ನಿರಂತರವಾಗಿದ್ದರೂ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ಸಿದ್ದಾಪುರ ಪಟ್ಟಣದಲ್ಲಿ ಒಂದು ಗಂಟೆ ಬಂದ್ ನಡೆಸಿದರು. ತೋಟಗಳಿಗೆ ಕಾಡಾನೆಗಳು ಬಂದಿರುವ ಮಾಹಿತಿಯಿದ್ದರೂ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುತ್ತಿಲ್ಲ ಎಂದು ಆರೋಪಿಸಿದರು.