ಸರ್ಕಾರಿ ನೌಕರರಾದ ಬಿ.ಕೆ. ಪವಿತ್ರಾ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಬಡ್ತಿ ಮೀಸಲಾತಿ ವಿಧಾನ ಅನುಸರಿಸುವ ರಾಜ್ಯ ಸರ್ಕಾರದ 2002ರ ಕಾಯ್ದೆಯನ್ನು ರದ್ದುಪಡಿಸಿ ಕಳೆದ ಫೆಬ್ರುವರಿ 9ರಂದು ಆದೇಶಿಸಿತ್ತು. ಅಲ್ಲದೆ, ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸುವಂತೆಯೂ ಸೂಚಿಸಿತ್ತು. ಆ ಆದೇಶದ ಪ್ರಕಾರ ರಾಜ್ಯ ಸರ್ಕಾರ ಕಳೆದ ಮೇ 8ರಂದು ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿತ್ತು.