ಪುಂಡಲೀಕ ಹಾಲಂಬಿ ಅವರು ಪರಿಷತ್ತಿನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸ್ಮಾರಕ ಭವನ ನಿರ್ಮಿಸುವ ಬಗ್ಗೆ ನನ್ನೊಂದಿಗೆ ಚರ್ಚಿಸಿದ್ದರು. ಭವನದ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ್ದೆವು. ಇದೇ ಸರ್ಕಾರದ ಅವಧಿಯಲ್ಲಿ ಭವನ ನಿರ್ಮಾಣ ಮಾಡಿದ ಕೀರ್ತಿ ಮನು ಬಳಿಗಾರ್ ಅವರಿಗೆ ಸಲ್ಲುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದರು.