ಮಳವಳ್ಳಿ: ಜಾನುವಾರು ಸಾಕಾಣಿಕೆ ಇತ್ತೀಚಿನ ದಿನಗಳಲ್ಲಿ ಮುಖ್ಯ ಕಸುಬಾಗಿ ಮಾರ್ಪಾಡಾಗಿದ್ದು, ರೈತರಿಗೆ ನಿತ್ಯ ಹಣ ಕೊಡುವ ಉದ್ಯೋಗವಾಗಿದೆ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಎಂ.ಪಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಪಟ್ಟಣದ ಪಶು ಇಲಾಖೆ ಕಚೇರಿ ಆವರಣದಲ್ಲಿ ಈಚೆಗೆ ಜಾನುವಾರು ಅಧಿಕಾರಿಗಳು, ಹಿರಿಯ ಪಶು ವೈದ್ಯಕೀಯ ಪರೀಕ್ಷಕರಿಗೆ ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಾನುವಾರುಗಳ ವೈಜ್ಞಾನಿಕ ನಿರ್ವಹಣೆ ಮಾಡುವುದರಿಂಂದ ಲಾಭಾಂಶ ಹೆಚ್ಚಿಸಿ ರೈತರು ಆರ್ಥಿಕ ಸಫಲತೆ ಪಡೆಯಬಹದು. ಇದಕ್ಕೆ ಪೂರಕವಾಗಿ ವರ್ಷದಲ್ಲಿ ಕನಿಷ್ಟ ಎರಡು ಬಾರಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ರೈತರಿಗೆ ಅರಿವು ಮೂಡಿಸಿ ಎಂದು ಸಲಹೆ ನೀಡಿದರು.
ವರ್ಗಾವಣೆಗೊಂಡ ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಪರಮೇಶ್ವರಪ್ಪ ಅವರನ್ನು ಬೀಳ್ಕೊಡಲಾಯಿತು. ಡಾ. ಬಾಲಸುಂದರ್, ಉದಯ್ ಕುಮಾರ್, ನಾಗರಾಜು, ಗಂಗಾಧರಸ್ವಾಮಿ, ಪುಟ್ಟರಾಜು ಹಾಜರಿದ್ದರು.