ಹೋಟೆಲ್ ಒಂದರಲ್ಲಿ ದನದ ಮಾಂಸದಿಂದ ಅಡುಗೆ ಸಿದ್ಧಪಡಿಸುತ್ತಿರುವ ಬಾಣಸಿಗನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ, ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಅಡುಗೆ ಸಹಾಯಕನಂತೆಯೂ ಬಿಂಬಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದಕ್ಕೆ ಉತ್ತರ ನೀಡುವ ಭರದಲ್ಲಿ ಬಿಜೆಪಿಯನ್ನು ‘ಬೀಫ್ ಜನತಾ ಪಕ್ಷ’ ಎಂದು ಬಿಂಬಿಸಿ ವಿಡಿಯೊ ಹರಿಬಿಟ್ಟಿರುವ ಕುರಿತು ಪಕ್ಷದ ವರಿಷ್ಠರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.