ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಲೋಕನಾಥ ಹೆಬಸೂರ ‘ನೀರಿನ ವಿಷಯದಲ್ಲಿ ಎಲ್ಲಾ ಪಕ್ಷಗಳು ರಾಜಕೀಯ ಮಾಡುತ್ತಿವೆ. ಇದರಿಂದ ಹೋರಾಟಗಾರರ ಪ್ರಯತ್ನಕ್ಕೆ ಬೆಲೆಯೇ ಇಲ್ಲದಂತಾಗಿದೆ. ಆದ್ದರಿಂದ, ಪ್ರಧಾನಿಗೆ ಮುತ್ತಿಗೆ ಹಾಕಲು ಉತ್ತರ ಕರ್ನಾಟಕದಿಂದ ಸಾವಿರಾರು ರೈತರು ಬೆಂಗಳೂರಿಗೆ ತೆರಳಲಿದ್ದೇವೆ’ ಎಂದರು.