ಶಾಸಕ ಜಿ.ಹಂಪಯ್ಯ ನಾಯಕ ಮಾತನಾಡಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಿಲ್ಲ. ಪಟ್ಟಣದ ಜನರ ಬೇಡಿಕೆಗೆ ಅನುಗುಣವಾಗಿ ಬಸ್ ನಿಲ್ದಾಣ, ಕುಡಿಯುವ ನೀರಿನ ಕೆರೆ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ ಎಂದರು. ಫಾದರ್ ಐವನ್ ಪಿಂಟೊ, ಡಾ.ಸರಮಸ್ತ ಧಣಿ, ಜಿಲ್ಲಾ ಪಂಚಾಯಿತಿ ಸದಸ್ಯ ಕಿರಲಿಂಗಪ್ಪ,ಮಾಜಿ ಸದಸ್ಯ ಮಾಳಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಮೌನೇಶ ಬುಳ್ಳಾಪುರ, ಎಪಿಎಂಸಿ ನಿರ್ದೇಶಕ ವೀರಾರಡ್ಡೆಪ್ಪ ಭಾವಿಕಟ್ಟಿ, ಕಾಂಗ್ರೆಸ್ ಮುಖಂಡರಾದ ಈ.ಶೇಷಗಿರಿರಾವ್, ಡಾ.ಡಿ.ನಾಗಪ್ಪ, ಯಮನಪ್ಪ ದಿನ್ನಿ ಮತ್ತಿತರರು ಉಪಸ್ಥಿತರಿದ್ದರು.