ಜೊಹಾನ್ಸ್ಬರ್ಗ್: ಭಾರತ ತಂಡ ಬುಧವಾರ ಇಲ್ಲಿ ಆರಂಭವಾದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದು ಆರಂಭದಲ್ಲಿ ಎರಡು ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತ ಅನುಭವಿಸಿದೆ.
ಭಾರತ 13 ರನ್ ಪೇರಿಸುವ ವೇಳೆಗೆ 2 ವಿಕೆಟ್ ಕಳೆದುಕೊಂಡಿತು. ಮುರುಳಿ ವಿಜಯ್ 8 ರನ್ಗಳಿಗೆ ಹಾಗೂ ಕೆ.ಎಲ್. ರಾಹುಲ್ ಶೂನ್ಯಕ್ಕೆ ಔಟಾದರು. ನಂತರ ಬಂದ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ತಾಳ್ಮೆಯ ಆಟವಾಡುತ್ತಿದ್ದಾರೆ.
ಇತ್ತೀಚೆಗೆ ಭಾರತ 2 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿತ್ತು.