ಧಾರವಾಡ: ವಸತಿರಹಿತ ಬಡ ಕುಟುಂಬಗಳಿಗೆ ಆಶ್ರಯ ಮನೆ ಹಾಗೂ ನಿವೇಶನ ನೀಡುವಂತೆ ಆಗ್ರಹಿಸಿ 20 ದಿನಗಳಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಸಮತಾ ಸೇನಾ ಕಾರ್ಯಕರ್ತರು, ಮಂಗಳವಾರ ಪ್ರತಿಭಟನಾ ಸ್ಥಳದಲ್ಲೇ ಅಡುಗೆ ತಯಾರಿಸಿ, ಊಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.