ವಿರಕ್ತಮಠದ ಶಿವಬಸವ ಸ್ವಾಮೀಜಿ, ಮುತ್ತಿನಕಂತಿಮಠದ ಚಂದ್ರಶೇಖರ ಸ್ವಾಮೀಜಿ ಸಾನ್ನಿಧ್ಯ, ತಾಲ್ಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ಅಕ್ಕಿ, ಅಡಿವೆಪ್ಪ ಆಲದಕಟ್ಟಿ, ಮಹೇಶ ವಿರಪಣ್ಣನವರ, ಮಾಲತೇಶ ಪರಪ್ಪನವರ, ಬಸವರಾಜ್ ಕೋರಿ, ಪ್ರೇಮಾನಂದ ಇದ್ದರು. ಇದಕ್ಕೂ ಮೊದಲಿಗೆ ಪ್ರಮುಖ ಬೀದಿಗಳಲ್ಲಿ ರೈತ ಜಾಗೃತಿ ಜಾಥಾ ನಡೆಯಿತು.