ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ ಶಾಸಕರ ಅನರ್ಹ ಪ್ರಕರಣ: ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಕಾರ

Last Updated 24 ಜನವರಿ 2018, 12:27 IST
ಅಕ್ಷರ ಗಾತ್ರ

ನವದೆಹಲಿ: ಆಮ್‌ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಿ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಆದರೆ, ಜನವರಿ 29ರವರೆಗೆ ಉಪಚುನಾವಣೆ ದಿನಾಂಕ ಘೋಷಿಸದಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಅನರ್ಹತೆ ಪ್ರಶ್ನಿಸಿ ಶಾಸಕರು ಸಲ್ಲಿಸಿರುವ ಅರ್ಜಿ ಬಗ್ಗೆ ಉತ್ತರ ಸಲ್ಲಿಸುವಂತೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ನ್ಯಾಯಮೂರ್ತಿ ವಿಭು ಬಖ್ರು ಸೂಚಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಚುನಾವಣಾ ಆಯೋಗ ಜ.29ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT