ಸಂಬಲ್ಪುರ(ಒಡಿಶಾ): ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಬಸ್ಸೊಂದು ಇಲ್ಲಿನ ಗೌಡಪಲ್ಲಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸೇತುವೆ ಮೇಲಿನಿಂದ ಕಾಲುವೆಗೆ ಬಿದ್ದು, ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 32 ಮಂದಿಗೆ ಗಾಯಗಳಾಗಿವೆ.
ಒಡಿಶಾ ರಾಜ್ಯದ ಸಂಬಲ್ಪುರ– ರಾಯರಂಗಪುರ ರಾಷ್ಟ್ರೀಯ ಹೆದ್ದಾರಿ 6 ನಲ್ಲಿ ಈ ಅಪಘಾತ ಸಂಂಭವಿಸಿದೆ. ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಗೊಂಡವರನ್ನು ಬುರ್ಲಾದಲ್ಲಿರುವ ವೀರ್ ಸುರೇಂದ್ರ ಸಾಯಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ರಿಸರ್ಚ್ ಸಂಸ್ಥೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಅಪಘಾತದಲ್ಲಿ ಸಾವಿಗೀಡಾದವರ ನಾಲ್ವರ ಕುಟುಂಬಗಳಿಗೆ ₹2 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಹೇಳಿದ್ದಾರೆ.