‘ವೀರಶೈವ ಧರ್ಮಕ್ಕೆ ಅಷ್ಟಾವರಣ, ಪಂಚಾಚಾರ ಮತ್ತು ಷಟ್ಸ್ಥಲಗಳು ಮೂಲಾಧಾರವಾಗಿವೆ. ಇವುಗಳಲ್ಲಿ ನಂಬಿಕೆ, ಶೃದ್ಧೆ ಇಲ್ಲದವರು ವೀರಶೈವರಲ್ಲ, ಲಿಂಗಾಯತರೂ ಅಲ್ಲ. ಆಚರಣೆಯಿಂದ ಮಾತ್ರ ವೀರಶೈವರಾಗಬಹುದೇ ಹೊರತು ಕೇವಲ ಮಾತಿನಿಂದಲ್ಲ. ಪಂಚಪೀಠಗಳ ಜನಪ್ರಿಯತೆ ಮತ್ತು ಅದ್ಭುತ ಶಕ್ತಿ ಕಂಡು ದ್ವೇಷ, ಅಸೂಯೆಯಿಂದ ಕೆಲವರು ಮಾತನಾಡುತ್ತಾರೆ. ನೀತಿ ಸಂಹಿತೆ ಮೀರಿ ನಡೆದವರಾರಿಗೂ ಒಳಿತಾಗಿಲ್ಲ’ ಎಂದು ಮಾರ್ಮಿಕವಾಗಿ ನುಡಿದರು.