ಜಮ್ಮ ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬತೆಂಗೂ ಸಮೀಪ ಕಳೆದ ವರ್ಷ ಜುಲೈ 10ರಂದು ಅಮರನಾಥ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದಾಗ ಗಫೂರ್ ಎದೆಗುಂದಲಿಲ್ಲ. ತನ್ನ ಜೀವವನ್ನೂ ಲೆಕ್ಕಿಸದೆ, ಬಸ್ನ ಮುಂದಿನ ಗಾಜು ಪುಡಿಯಾಗಿದ್ದರೂ ಅದರಲ್ಲಿಯೇ ಬಸ್ ಅನ್ನು ಸುಮಾರು ಎರಡು ಕಿಲೋ ಮೀಟರ್ವರೆಗೆ ವೇಗವಾಗಿ ಚಾಲನೆ ಮಾಡಿದರು. ಚಾಲಕನ ಸಮಯ ಪ್ರಜ್ಞೆ ಮತ್ತು ಧೈರ್ಯದಿಂದ 52 ಯಾತಾರ್ಥಿಗಳ ಜೀವ ಉಳಿಯಿತು. ಈ ಘಟನೆಯಲ್ಲಿ 7 ಮಂದಿ ಸಾವಿಗೀಡಾಗಿ 14 ಮಂದಿ ಗಾಯಗೊಂಡಿದ್ದರು.