‘ಪದ್ಮಾವತ್’ ಸಿನಿಮಾ ಬಿಡುಗಡೆಗೆ ವ್ಯಕ್ತವಾಗುತ್ತಿರುವ ವಿರೋಧ ಪ್ರಸ್ತಾಪಿಸಿದ ಅವರು, ಪ್ರತಿಭಟನೆಗಳು ಪ್ರಜಾತಾಂತ್ರಿಕವಾಗಿ ನಡೆಯುವ ಬದಲು ಹಲ್ಲೆಯ ಸ್ವರೂಪ ಪಡೆದುಕೊಳ್ಳುತ್ತಿವೆ. ‘ತಲೆ ತೆಗೆಯುತ್ತೇವೆ, ಕೊಲೆ ಮಾಡಿದವರಿಗೆ ಬಹುಮಾನ ನೀಡುತ್ತೇವೆ’ ಎಂದು ಘೋಷಿಸುವ ಮೂಲಕ ಪ್ರತಿಭಟಿಸುತ್ತಿರುವುದು ಸರಿಯಲ್ಲ’ ಎಂದರು.