ಬೆಂಗಳೂರು: ಮಹದಾಯಿ ಯೋಜನೆ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಸಂಘಟನೆಗಳ ಒಕ್ಕೂಟವು ಕರೆ ನೀಡಿರುವ ‘ಕರ್ನಾಟಕ ಬಂದ್’ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೆಲ ಭಾಗಗಳಲ್ಲಿ ಬಸ್ ಸಂಚಾರ ಸ್ಥಗಿತ ಹಾಗೂ ವ್ಯತ್ಯಯಗೊಂಡಿದೆ. ಮಂಗಳೂರು, ಉಡುಪಿ, ಶಿರಸಿ, ರಾಯಚೂರು ಹಾಗೂ ಕಲಬುರ್ಗಿಯಲ್ಲಿ ಸಹಜ ಸ್ಥಿತಿ ಮುಂದುವರಿದಿದೆ.
ಬೆಂಗಳೂರಿನ ಅತ್ತಿಬೆಲೆ ರಸ್ತೆಯಲ್ಲಿ ಕನ್ನಡ ಸಂಘಟನೆಯ ಹೋರಾಟಗಾರರು ಉರುಳುಸೇವೆ ನಡೆಸಿ ಪ್ರತಿಭಟನೆ ನಡೆಸಿದರು.