ಕರ್ನಾಟಕ ರಕ್ಷಣಾ ವೇದಿಕೆಯ(ಕರವೇ) ನಾರಾಯಣ ಗೌಡ ಬಣದ ಕಾರ್ಯಕರ್ತರು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ರೆಹಮಾನ್ ಹೊಳಿ ನೇತೃತ್ವದಲ್ಲಿ ಧಾರವಾಡ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಇದರಿಂದಾಗಿ ಪೊಲೀಸ್ ಮತ್ತು ಕರವೇ ಕಾರ್ಯಕರ್ತರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಕಾರ್ಯಕರ್ತರು ರೈಲ್ವೆ ನಿಲ್ದಾಣದೊಳಗೆ ಬಿಡುವಂತೆ ಪಟ್ಟು ಹಿಡಿದರು. ಅಲ್ಲದೇ, ರೈಲು ರೋಕೋಗೆ ಅವಕಾಶ ಮಾಡಿಕೊಡಲು ಪೊಲೀಸರಲ್ಲಿ ಮನವಿ ಮಾಡಿದರು. ಇದಕ್ಕೆ ನಿರಾಕರಿಸಿದ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.