ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಕಟ್ಟಡದಿಂದ ಜಿಗಿದು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರದುರ್ಗದ ಶಿಕ್ಷಕ ಮಂಜುನಾಥ್ ಅವರ ಮಗಳು ರಚನಾ (18) ಆತ್ಮಹತ್ಯೆ ಮಾಡಿಕೊಂಡವರು. ಈಕೆಗೆ ರಕ್ತರ ಕ್ಯಾನ್ಸರ್ ಇತ್ತೆಂದು ವೈದ್ಯರು ಹೇಳಿದ್ದರು ಎನ್ನಲಾಗಿದ್ದು, ಇದೇ ಚಿಂತೆಯಿಂದ ಇತ್ತೀಚಿನ ಪ್ರಾಯೋಗಿಕ ಪರೀಕ್ಷೆಯನ್ನೂ ಗಂಭೀರವಾಗಿ ಪರಿಗಣಿಸಲಾಗಿರಲಿಲ್ಲ ಎನ್ನಲಾಗಿದೆ.