ಬೆಂಗಳೂರು: ಲಾಲ್ಬಾಗ್ ಉದ್ಯಾನದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಗುರುವಾರವೂ ಜನಸಾಗರ ಹರಿದುಬಂದಿದೆ. ಬಂದ್ ನಡುವೆಯೂ 16 ಸಾವಿರಕ್ಕೂ ಅಧಿಕ ಪುಷ್ಪಪ್ರಿಯರು ಭೇಟಿ ನೀಡಿದ್ದರು.
‘ಒಟ್ಟು ₹7.6 ಲಕ್ಷ ಹಣ ಸಂಗ್ರಹವಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಇದ್ದಿದ್ದರಿಂದ ಶಾಲೆಗಳಿಂದ ಮಕ್ಕಳು ಬಂದಿರಲಿಲ್ಲ. ಹಾಗಾಗಿ ಈ ಹಿಂದಿನ ದಿನಗಳಿಗಿಂತ ಜನಸಂಖ್ಯೆ ಕಡಿಮೆಯಾಗಿದೆ’ ಎಂದು ರಾಜ್ಯ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಂ.ಆರ್. ಚಂದ್ರಶೇಖರ್ ತಿಳಿಸಿದರು.
ನಗರದಲ್ಲಿ ಬಂದ್ನಿಂದಾಗಿ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೆಚ್ಚು ಜನ ಬರುವ ನಿರೀಕ್ಷೆಯಿರಲಿಲ್ಲ. ಹೀಗಿದ್ದೂ, ಸಾಕಷ್ಟು ಜನ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ್ದಾರೆ ಎಂದು ಹೇಳಿದರು.