2016ರಲ್ಲಿ ನಡೆದಿದ್ದ ಚಿಕ್ಕತಿಮ್ಮೇಗೌಡ ಎಂಬುವರ ಕೊಲೆಗೆ ಪ್ರತಿಯಾಗಿ ಸೇಡು ತೀರಿಸಿಕೊಳ್ಳುವುದಕ್ಕಾಗಿ ಗೋವಿಂದೇಗೌಡ ಅವರನ್ನು ಹತ್ಯೆ ಮಾಡಿರುವುದನ್ನು ರಾಜಗೋಪಾಲನಗರ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದರು. ಬಳಿಕ ಚಿಕ್ಕತಿಮ್ಮೇಗೌಡ ಅವರ ಸಹೋದರ ನಟರಾಜ್, ಲಕ್ಷ್ಮಣ, ದೇವರಾಜ್ ಸೇರಿದಂತೆ 9 ಮಂದಿಯನ್ನು ಕೆಲ ವಾರಗಳ ಹಿಂದಷ್ಟೇ ಬಂಧಿಸಿದ್ದರು. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಶಂಕೆ ಇರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ.