ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಅನುದಾನ ಖರ್ಚಾಗಿರುವ ಬಗ್ಗೆ ಲೆಕ್ಕ ಕೇಳಲು ಅಮಿತ್ ಶಾ ಯಾರು?

Last Updated 26 ಜನವರಿ 2018, 5:06 IST
ಅಕ್ಷರ ಗಾತ್ರ

ಬೆಂಗಳೂರು: ಹುಲಿ, ಸಿಂಹ, ಕಿರುಬಗಳನ್ನು ಸಾಕಷ್ಟು ನೋಡಿದ್ದೇವೆ. ಯಾರು ಸಿಂಹ ಆಗಬೇಕು ಎಂಬುದನ್ನು 2018ರ ಚುನಾವಣೆಯಲ್ಲಿ ಜನ ತೀರ್ಮಾನ ಮಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಹೇಳಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ಕೇಂದ್ರದ ಅನುದಾನ ಖರ್ಚಾಗಿರುವ ಬಗ್ಗೆ ಲೆಕ್ಕ ಕೇಳಲು ಅಮಿತ್ ಶಾ ಯಾರು? ಬಿಜೆಪಿ ಅಧ್ಯಕ್ಷರಿಗೆ ಲೆಕ್ಕ ಕೊಡಬೇಕೆ? ನಮ್ಮ ಪಾಲಿನ ಅನುದಾನವನ್ನಷ್ಟೇ ಕೇಂದ್ರ ಸರ್ಕಾರ ಕೊಟ್ಟಿದೆ ಹೊಸದಾಗಿ ಏನು ಕೊಡುಗೆ ನೀಡಿದೆ?

ರಾಜ್ಯದ ಸಚಿವರ ಹಗರಣಗಳ ದಾಖಲೆಗಳು ದೆಹಲಿಗೆ ತಲುಪಿ ಪ್ರಯೋಜನ ಏನು? ರಾಜ್ಯದ ಜನರ ಮುಂದಿಡಲಿ. ಮುಖ್ಯಮಂತ್ರಿಯೇ ಹಲವಾರು ಬಾರಿ ಬಹಿರಂಗ ಚರ್ಚೆಗೆ ಕರೆದಿದ್ದಾರೆ. ದಾಖಲೆಗಳಿದ್ದರೆ ಬನ್ನಿ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT