ಈ ಕುರಿತು ಪ್ರತಿಕ್ರಿಯಿಸಿದ ಶಾಸಕ, ‘ಅವರು ಕಾರ್ಯಕ್ರಮದ ಬಗ್ಗೆ ಹೇಳುವುದನ್ನು ಬಿಟ್ಟು ರಾಜಕೀಯ ಮಾತನಾಡಿ ಮುಗ್ಧ ಗ್ರಾಮಸ್ಥರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದರು. ನನ್ನ ಬಗ್ಗೆ ವೈಯುಕ್ತಿಕವಾಗಿ ಆಧಾರರಹಿತ ಆರೋಪಗಳನ್ನು ಮಾಡಲು ಪ್ರಾರಂಭಿಸಿದರು. ಹೀಗಾಗಿ ಮಧ್ಯಪ್ರವೇಶಿಸಿ ತಿಳಿಹೇಳಿದೆ’ ಎಂದು ತಿಳಿಸಿದರು.