ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜವಾಬ್ದಾರಿ ಅರಿತು ಮತ ಹಾಕಿ’

Last Updated 26 ಜನವರಿ 2018, 6:49 IST
ಅಕ್ಷರ ಗಾತ್ರ

ಸಿರುಗುಪ್ಪ: ‘ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ನೀಡುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಮತದಾರರ ಮೇಲಿದೆ. ಅದನ್ನು ಅರಿತುಕೊಂಡು ಮತ ಚಲಾವಣೆ ಮಾಡಬೇಕು’ ಎಂದು ತಹಶೀಲ್ದಾರ್‌ ಎಂ.ಸುನೀತಾ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಶಾಲೆಯ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಮಾತನಾಡಿ, ‘ಮತದಾರರು ಆಮಿಷಗಳಿಗೆ ಒಳಗಾಗಬಾರದು. ಉತ್ತಮ ಜನಪ್ರತಿನಿಧಿಗಳ ಆಯ್ಕೆಗೆ ಹೆಚ್ಚಿನ ಪ್ರಾಸಶ್ತ್ಯ ನೀಡಬೇಕು’ ಎಂದರು. ಪ್ರಾಚಾರ್ಯ ವೀರೇಶಪ್ಪ ಮಾತನಾಡಿದರು.

ಇದೇ ವೇಳೆಯಲ್ಲಿಹೊಸದಾಗಿ ಹೆಸರು ಸೇರ್ಪಡೆಗೊಳಿಸಿದವರಿಗೆ‌ ತಹಶೀಲ್ದಾರ್ ಸುನೀತಾ ಚುನಾವಣಾ ಗುರುತಿನ ಚೀಟಿ ವಿತರಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಚುನಾವಣಾ ಪ್ರತಿಜ್ಞಾ ವಿಧಿ ಭೋದಿಸಲಾಯಿತು.

ಪೌರಾಯುಕ್ತ ಮರಿಲಿಂಗಪ್ಪ, ಶಿರಸ್ತೇದಾರ್ ಶಶಿಕಾಂತ್ ವೀರಾಪೂರ್, ಕಂದಾಯ ನಿರೀಕ್ಷಕ ಮೊಹಮ್ಮದ್ ಸಾಧಿಕ್, ಚುನಾವಣಾ ಸಿಬ್ಬಂದಿ ರೇವಣಾರಾಧ್ಯ, ನಗರಸಭೆಯ ಬಸವರಾಜ್, ಉಪನ್ಯಾಸ ಯರ‍್ರೆಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT