ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ವರ್ಷದ ಆರಂಭದಿಂದ ಇಲ್ಲಿಯವರೆಗೆ ಐದು ಆನೆಗಳು ಮೃತಪಟ್ಟಿವೆ. ಇದರಲ್ಲಿ ಮೂರು ಮರಿಗಳು ಸೇರಿವೆ. ಒಟ್ಟು ನಾಲ್ಕು ಆನೆಗಳು ಅನಾರೋಗ್ಯದಿಂದ ಸಾವಿಗೀಡಾಗಿವೆ. ಗೋಪಾಲಸ್ವಾಮಿ ಬೆಟ್ಟ ವಲಯದ ಹಿರಿಕೆರೆ ಅರಣ್ಯ ಪ್ರದೇಶದಲ್ಲಿ ಗುರುವಾರ ಹೆಣ್ಣಾನೆಯ ಕಳೇಬರ ದೊರೆತಿದ್ದು, ಅದರ ಸಾವಿಗೆ ಕಾರಣ ತಿಳಿದುಬಂದಿಲ್ಲ.