ದಾವಣಗೆರೆಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಶ್ವ ಕನ್ನಡ ಸಮ್ಮೇಳನವನ್ನು ಸರ್ಕಾರ ನಡೆಸಬೇಕಿದೆ. ಈಗಾಗಲೇ ಅನುದಾನವು ಬಿಡುಗಡೆಯಾಗಿದೆ. ಫೆಬ್ರುವರಿಯಲ್ಲಿ ನಡೆಯಬೇಕಿದ್ದ ಈ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಒಂದೆರಡು ಸಭೆಗಳು ನಡೆದಿದ್ದವು. ಆ ಸಭೆಗಳಲ್ಲಿ ನಾನೂ ಭಾಗವಹಿಸಿ ಸಲಹೆ ನೀಡಿದ್ದೆ. ಆದರೆ ಈ ಕುರಿತು ಸರ್ಕಾರವಿನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲದಿರುವುದು ಕನ್ನಡ ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರ ಇಚ್ಛಾಶಕ್ತಿಯ ಕೊರತೆಯನ್ನು ಎತ್ತಿಹಿಡಿಯುತ್ತಿದೆ’ ಎಂದರು.