ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರವಯುತವಾಗಿ ‘ಪದ್ಮಶ್ರೀ’ ಪ್ರಶಸ್ತಿ ನಿರಾಕರಿಸಿದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ

Last Updated 26 ಜನವರಿ 2018, 10:41 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ‘ಪದ್ಮಶ್ರೀ’ ಪ್ರಶಸ್ತಿಗೆ ಪುರಸ್ಕೃತಗೊಂಡಿದ್ದು, ಅದನ್ನು ಗೌರವವಾಗಿ ಹಿಂತಿರುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

‘ಈ ಹಿಂದೆಯೂ ಹಲ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ ಕೊಡುವುದಾಗಿ ತಮ್ಮನ್ನು ಸಂಪರ್ಕಿಸಿ, ‘ಗೌಡಾ’ ಸ್ವೀಕರಿಸುವಂತೆ ಮನವಿ ಮಾಡಿದ್ದವು. ಹಲ ಸಂಘ–ಸಂಸ್ಥೆಗಳು ಪ್ರಶಸ್ತಿ ನೀಡಲು ಮುಂದಾಗಿದ್ದವು. ಆ ಸಂದರ್ಭ ಅವರಿಗೆಲ್ಲ ನಮಗೆ ಯಾವುದೂ ಬೇಡ ಎಂದು ಹೇಳಿದ್ದೆವು ಎಂದು ಸ್ವಾಮೀಜಿ ಹೇಳಿದ್ದಾರೆ.

ಇದೀಗ ಕೇಂದ್ರ ಸರ್ಕಾರ ನಮ್ಮನ್ನು ಸಂಪರ್ಕಿಸದೆ ‘ಪದ್ಮಶ್ರೀ’ ಘೋಷಿಸಿದೆ. ಗುರುತಿಸಿದ್ದಕ್ಕೆ ಅನಂತ ಧನ್ಯವಾದ. ಸಮಾಜದಲ್ಲಿ ಅಸಾಧಾರಣ ಸೇವೆಗೈದ ಸಾಧಕರಿದ್ದಾರೆ. ಅಂತಹವರಿಗೆ ಇದನ್ನು ನೀಡಿದರೆ ಒಳ್ಳೆಯದು. ನಮಗ ಇದರ ಅವಶ್ಯಕತೆಯಿಲ್ಲ’ ಎಂದು  ಸಿದ್ಧೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT