<p><strong>ಹಗರಿಬೊಮ್ಮನಹಳ್ಳಿ: </strong>ಮಹದಾಯಿ ಯೋಜನೆ ಜಾರಿಗೊಳಿಸುವಂತೆ ವಿವಿಧ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ಪಟ್ಟಣದಲ್ಲಿ ಗುರುವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಶಾಲೆ– ಕಾಲೇಜುಗಳು, ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಿದವು. ಮಾರುಕಟ್ಟೆ ವಹಿವಾಟಿನಲ್ಲಿ ಯಾವುದೆ ವ್ಯತ್ಯಾಸ ಕಂಡುಬರಲಿಲ್ಲ. ಬಸ್ ಸಂಚಾರವೂ ಎಂದಿನಂತೆಯೇ ಇತ್ತು.</p>.<p>ಕರವೇ ನಾರಾಯಣಗೌಡ ಬಣದ ಪದಾಧಿಕಾರಿಗಳು ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಂ.ಗೌಸ್ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿದರು.</p>.<p>ಇದೇ ವೇಳೆ, ತಹಶೀಲ್ದಾರ್ ಕಚೇರಿಯ ಎದುರು ಧರಣಿ ನಡೆಸಿದರು. ಪ್ರಾಂತ ರೈತಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಕೊಟಿಗೆ ಮಲ್ಲಿಕಾರ್ಜುನ ಮಾತನಾಡಿದರು.</p>.<p>ಸಿಪಿಎಂ ತಾಲ್ಲೂಕು ಘಟಕದ ಕಾರ್ಯದರ್ಶಿ ಎಸ್.ಜಗನ್ನಾಥ್ ಮಾತನಾಡಿದರು. ಕನ್ನಡಪರ ಸಂಘಟನೆಯ ಮುಖಂಡರಾದ ಸೈಯದ್ ಇರ್ಫಾನ್, ಕೆ.ಎಂ.ಮಂಜುನಾಥ, ಎಸ್.ನಾಗರಾಜ, ಟಿ.ರಾಜು, ಬಸವರಾಜ, ಕೆ.ಶಿವರಾಜ, ಡಿ.ಇಸ್ಮಾಯಿಲ್ ಭಾಗವವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ: </strong>ಮಹದಾಯಿ ಯೋಜನೆ ಜಾರಿಗೊಳಿಸುವಂತೆ ವಿವಿಧ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ಪಟ್ಟಣದಲ್ಲಿ ಗುರುವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಶಾಲೆ– ಕಾಲೇಜುಗಳು, ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಿದವು. ಮಾರುಕಟ್ಟೆ ವಹಿವಾಟಿನಲ್ಲಿ ಯಾವುದೆ ವ್ಯತ್ಯಾಸ ಕಂಡುಬರಲಿಲ್ಲ. ಬಸ್ ಸಂಚಾರವೂ ಎಂದಿನಂತೆಯೇ ಇತ್ತು.</p>.<p>ಕರವೇ ನಾರಾಯಣಗೌಡ ಬಣದ ಪದಾಧಿಕಾರಿಗಳು ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಂ.ಗೌಸ್ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿದರು.</p>.<p>ಇದೇ ವೇಳೆ, ತಹಶೀಲ್ದಾರ್ ಕಚೇರಿಯ ಎದುರು ಧರಣಿ ನಡೆಸಿದರು. ಪ್ರಾಂತ ರೈತಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಕೊಟಿಗೆ ಮಲ್ಲಿಕಾರ್ಜುನ ಮಾತನಾಡಿದರು.</p>.<p>ಸಿಪಿಎಂ ತಾಲ್ಲೂಕು ಘಟಕದ ಕಾರ್ಯದರ್ಶಿ ಎಸ್.ಜಗನ್ನಾಥ್ ಮಾತನಾಡಿದರು. ಕನ್ನಡಪರ ಸಂಘಟನೆಯ ಮುಖಂಡರಾದ ಸೈಯದ್ ಇರ್ಫಾನ್, ಕೆ.ಎಂ.ಮಂಜುನಾಥ, ಎಸ್.ನಾಗರಾಜ, ಟಿ.ರಾಜು, ಬಸವರಾಜ, ಕೆ.ಶಿವರಾಜ, ಡಿ.ಇಸ್ಮಾಯಿಲ್ ಭಾಗವವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>