ಇದಕ್ಕೆ ಪ್ರತಿಕ್ರಿಯಿಸಿದ ಸದಾನಂದ ಗೌಡ, ಕಾಂಗ್ರೆಸ್ (ಐ) ರೂಪಿಸಿದ್ದೇ ಮಾಜಿ ಜೈಲು ಹಕ್ಕಿ, ಅವರು ದೇಶದ ಮಾಜಿ ಪ್ರಧಾನಿಯಾಗಿದ್ದರು. ಅವರ ಮಗ ಮಾಜಿ ಪ್ರಧಾನಿ ಬೋಫೋರ್ಸ್ ಭ್ರಷ್ಟಾಚಾರ ಹಗರಣದಲ್ಲಿ ಸಿಲುಕಿ ಶಾಶ್ವತವಾಗಿ ಜೈಲು ಹಕ್ಕಿಯಾಗಿರಬೇಕಾಗಿತ್ತು. ಆದರೆ ದುರದೃಷ್ಟವಶಾತ್ ನಿಮ್ಮ ಪಕ್ಷ ಪ್ರಾಯೋಜಿತ ಉಗ್ರವಾದವೇ ಅವರನ್ನು ಹತ್ಯೆ ಮಾಡಿತು. ಇದಕ್ಕಿಂತ ಇನ್ನೇನಾದರೂ ಪಟ್ಟಿ ಬೇಕಾ? ಎಂದು ಕೇಳಿದ್ದರು.