ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಕರ್ನಕಿಯಮ್ಮನ್ನ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಧ್ವಜಾರೋಹಣ ಮಾಡಿದ್ದರು. ಇದಕ್ಕೆ ವಿವಿಧೆಡೆಯಿಂದ ಆಕ್ಷೇಪ ವ್ಯಕ್ತವಾಗಿತ್ತು. ಇದರ ನಂತರ ಸುತ್ತೋಲೆ ಹೊರಡಿಸಿದ್ದ ಶಿಕ್ಷಣ ಇಲಾಖೆ, ಸರ್ಕಾರಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಅಥವಾ ವಿಭಾಗದ ಮುಖ್ಯಸ್ಥರು ಮಾತ್ರ ಧ್ವಜಾರೋಹಣ ಮಾಡಬೇಕು ಎಂದು ಸೂಚಿಸಿತ್ತು.