‘ಕರ್ನಾಟಕದಲ್ಲಿ ಹುಲಿ ಸಂರಕ್ಷಣೆ ಯೋಜನೆ ಜಾರಿಯಲ್ಲಿದೆ. ಬನ್ನೇರುಘಟ್ಟ, ನಾಗರಹೊಳೆ, ದಾಂಡೇಲಿಯಲ್ಲಿ ಸಾಕಷ್ಟು ಕಾಡಿದೆ. ಬಿಜೆಪಿಯ ಹುಲಿ, ಸಿಂಹಗಳು ಎಲ್ಲಿಬೇಕಾದರೂ ಓಡಾಡಲಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದರು. ‘ಶಾ ಹುಲಿ, ಮೋದಿ ಸಿಂಹ’ ಎಂಬ ಈಶ್ವರಪ್ಪ ಹೇಳಿಕೆಗೆ ಅವರು ತಿರುಗೇಟು ಕೊಟ್ಟಿದ್ದು ಹೀಗೆ.