ದೊಡ್ಡ ದೊಡ್ಡ ಹುದ್ದೆಗಳನ್ನು ಹಿಡಿದು ನಗರಗಳಲ್ಲಿ ವಾಸ ಮಾಡುವುದೇ ಅತ್ಯುತ್ತಮ ಜೀವನ ಎಂದು ಭ್ರಮಿಸಿರುವ ಜನರ ಸಂಖ್ಯೆಯೇ ಹೆಚ್ಚಾಗಿದೆ. ಸ್ವಚ್ಛ, ಸುಂದರ ಪರಿಸರದಲ್ಲಿ ಕೃಷಿ ಮಾಡುತ್ತಾ ಸರಳ ಜೀವನ ನಡೆಸುವ ರೈತರು ಹೆಮ್ಮೆ ಪಡಬೇಕಿತ್ತು. ಆದರೆ, ರೈತರು ಕೀಳರಿಮೆಯಿಂದ ನರಳುತ್ತಿದ್ದಾರೆ. ಈ ಕೀಳರಿಮೆಯೇ ರೈತರ ಎಲ್ಲಾ ಸಮಸ್ಯೆಗಳಿಗೆ ಮೂಲವಾಗಿದೆ. ಬರಗಾಲ, ಬಿಸಿಲು ಉಳಿದ ಎಲ್ಲಾ ವರ್ಗದವರಿಗಿಂತ ರೈತರ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಹೀಗಾಗಿ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು.