ಶುಕ್ರವಾರ ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಸಮುದಾಯಗಳ ಆರ್ಥಿಕ, ಸಾಮಾಜಿಕ ಪ್ರಸ್ತುತ ಪರಿಸ್ಥಿತಿ ಹೇಗಿದೆ. ಇದನ್ನು ಯಾವ ಮಾನದಂಡದಲ್ಲಿ ಅಭಿವೃದ್ಧಿಪಡಿಸಲು ಸಾಧ್ಯ ಎಂಬ ನಿಟ್ಟಿನಲ್ಲಿ ವರದಿ ನೀಡಬೇಕಿದೆ. ಕೇವಲ ಅಂಕಿ–ಅಂಶಗಳ ವರದಿಯಿಂದ ಯಾವುದೇ ಲಾಭವಿಲ್ಲ. ಆದ್ದರಿಂದ ವಿಶ್ಲೇಷಣಾ ವರದಿ ಸಿದ್ಧಪಡಿಸಲಾಗುತ್ತಿದೆ. ಮಾಹಿತಿಗಳ ಅಪ್ಲೋಡ್‘ ಕೆಲಸ ಪ್ರಗತಿಯಲ್ಲಿದ್ದು, ಒಂದು ತಿಂಗಳ ಒಳಗೆ ವರದಿ ಸಲ್ಲಿಸುವ ನಿರೀಕ್ಷೆ ಇದೆ’ ಎಂದು ಹೇಳಿದರು.