ನಗರದಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್.ವರಲಕ್ಷ್ಮಿ, ‘ಉದ್ಯಾನವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಬಿಬಿಎಂಪಿ ಅಧೀನದಲ್ಲಿರುವ ಉದ್ಯಾನದ 22 ಎಕರೆ ಪ್ರದೇಶವನ್ನು ತನ್ನ ಅಧೀನಕ್ಕೆ ಬಿಟ್ಟುಕೊಡುವಂತೆಯೂ ಅದು ಕೋರಿದೆ. ಅದಕ್ಕೆ ಅವಕಾಶ ಮಾಡಿಕೊಟ್ಟರೆ ಪ್ರತಿಭಟನೆ ನಡೆಸಲು ಜಾಗವೇ ಇಲ್ಲದಂತಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.