‘ಆಯೋಗವು ಪರಿಶಿಷ್ಟ ಜಾತಿಯಲ್ಲಿನ ಒಂದು ಉಪಜಾತಿಯ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಇದರ ಬಗ್ಗೆ ಸಾರ್ವಜನಿಕವಾಗಿ ಈವರೆಗೆ ಚರ್ಚೆ ನಡೆದಿಲ್ಲ. ರಾಜಕೀಯ ಹಿತಾಸಕ್ತಿಗಳ ಪ್ರಚೋದನೆಯಿಂದಾಗಿ ದಲಿತ ಸಮುದಾಯದ ಮಾದಿಗ, ಛಲವಾದಿ, ಲಂಬಾಣಿ, ಭೋವಿ, ಕೊರಚ, ಕೊರಮ, ದೊಂಬಿದಾಸ, ಬುಡಗ ಜಂಗಮ, ಸಿಳ್ಳೆಕ್ಯಾತ ಹಾಗೂ ಅಲೆಮಾರಿ ಸಮುದಾಯಗಳ ನಡುವೆ ವಿಷಬೀಜ ಬಿತ್ತಲಾಗುತ್ತಿದೆ’ ಎಂದು ದೂರಿದರು.