ಕಲಬುರ್ಗಿ: ಸಂವಿಧಾನದಲ್ಲಿ ಕೆಲವು ಅಂಶಗಳನ್ನು ಚರ್ಚೆಗೆ ಒಳಪಡಿಸಿ ತಿದ್ದುಪಡಿ ಮಾಡಬಹುದೇ ಹೊರತು, ಸಂವಿಧಾನವನ್ನು ಇಡಿಯಾಗಿ ಬದಲಾಯಿಸುವ ಮಾತನಾಡುವುದು ಸರಿಯಲ್ಲ. ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ನೂರಕ್ಕೂ ಹೆಚ್ಚು ಬಾರಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಈ ಎಲ್ಲ ತಿದ್ದುಪಡಿಗಳ ಸಂದರ್ಭದಲ್ಲಿ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತರುವ ಯತ್ನ ಮಾಡಿಲ್ಲ.ಈ ನಿಟ್ಟಿನಲ್ಲಿ ಸುಪ್ರಿಂಕೋರ್ಟ್ ಸಹ ಸ್ಪಷ್ಟ ನಿರ್ದೇಶನ ನೀಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕಸಭೆಯ ಮಾಜಿ ಸ್ಪೀಕರ್ ಹಾಗೂ ಮಾಜಿ ಗೃಹ ಸಚಿವ ಶಿವರಾಜ ಪಾಟೀಲ ಹೇಳಿದ್ದಾರೆ.