ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾ. 4, 5ರಂದು ರಾಷ್ಟ್ರಕೂಟ ಉತ್ಸವ

Last Updated 27 ಜನವರಿ 2018, 9:05 IST
ಅಕ್ಷರ ಗಾತ್ರ

ಕಲಬುರ್ಗಿ: ಮಾ.4 ಮತ್ತು 5 ರಂದು ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡದಲ್ಲಿ ರಾಷ್ಟ್ರಕೂಟ ಉತ್ಸವ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
ಸಾಹಿತಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಈ ವಿಷಯ ತಿಳಿಸಿದರು.


ಎರಡು ದಿನ ಸಾಂಸ್ಕೃತಿಕ ಹಾಗೂ ಸಾಹಿತ್ಯ ಉತ್ಸವ ನಡೆಯಲಿದೆ. ಸಾಂಸ್ಕೃತಿಕ ಉತ್ಸವವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ವಹಿಸಿದರೆ ಸಾಹಿತ್ಯವನ್ನು ಕರ್ನಾಟಕ ಕೇಂದ್ರೀಯ ವಿವಿ ಹಾಗೂ ಗುಲಬರ್ಗಾ ವಿವಿ ವಹಿಸುವವು.

ಉತ್ಸವಕ್ಕೆ ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ₹30 ಲಕ್ಷ ಬಿಡುಗಡೆ ಮಾಡಿದೆ. ಉಳಿದ ಖರ್ಚು ವೆಚ್ಚವನ್ನು ಎಚ್ ಕೆಆರ್ ಡಿಬಿ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಸಹಾಯ ಪಡೆಯಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT