ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಬೆಳೆ ವಿಮೆ ಬಗ್ಗೆ ರೈತರಿಗೆ ಮಾಹಿತಿ ಕೊರತೆ ಇದೆ. ಬರ ಪರಿಸ್ಥಿತಿಯಲ್ಲಿ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇನ್ನೂ ಸುಧಾರಿಸಬೇಕು. ಜಮೀನಿನಿಂದ ಮಾರುಕಟ್ಟೆಗೆ ಕೃಷಿ ಉತ್ಪನ್ನ ಸಾಗಣಿಕೆಗೆ ಸರ್ಕಾರ ವಾಹನದ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.