ಖಾನಾಪುರ: ಪ್ರತಿಯೊಬ್ಬ ಭಾರತೀಯರೂ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ತಹಶೀಲ್ದಾರ್ ಶಿವಾನಂದ ಉಳ್ಳೇಗಡ್ಡಿ ಹೇಳಿದರು. ಇಲ್ಲಿನ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ‘ಸಮಾಜದ ಬಹುದೊಡ್ಡ ಆಸ್ತಿಯಾಗಿರುವ ಯುವಜನರು ರಾಷ್ಟ್ರ ಭಕ್ತಿ, ರಾಷ್ಟ್ರದ ಬಗ್ಗೆ ಗೌರವ ಹಾಗೂ ಅಭಿಮಾನ ಹೊಂದಬೇಕು’ ಎಂದರು.