ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸವಿತಾ ಪಾಟೀಲ ಮಾತನಾಡಿದರು. ಉಪಾಧ್ಯಕ್ಷ ನೆಹರೂ ಪಾಟೀಲ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ಮೇತ್ರೆ, ಪ.ಪಂ. ಅಧ್ಯಕ್ಷ ರಾಜಕುಮಾರ ನಿರ್ಮಳೆ, ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ ಚವಾಣ್, ಸುರೇಖಾ ಭೋಸ್ಲೆ, ಸಿಪಿಐ ರಮೇಶಕುಮಾರ ಮೈಲೂರಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಚವಾಣ್ಶೆಟ್ಟಿ ಇದ್ದರು. ತಹಶೀಲ್ದಾರ್ ಎಂ.ಚಂದ್ರಶೇಖರ ಸ್ವಾಗತಿಸಿದರು. ಶಿಕ್ಷಕ ಶಾಲಿವಾನ ಉದಗೀರೆ ನಿರೂಪಿಸಿದರು. ನಂತರ ವಿವಿಧ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.