ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ

Last Updated 27 ಜನವರಿ 2018, 15:08 IST
ಅಕ್ಷರ ಗಾತ್ರ

ಬಳ್ಳಾರಿ: ಹೊಸಪೇಟೆ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಸಿಂಗ್ ಅವರು ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿಗೆ ತೆರಳಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಈ ಮೊದಲೇ ಹೇಳಿದ್ದರು:
ಜನವರಿ 26, ಗುರುವಾರ ಆಯೋಜಿಸಿದ್ದ ನಾನಾ ಸಮಾಜಗಳ ಮುಖಂಡರ ಸಮಾಲೋಚನೆ ಸಭೆಯಲ್ಲಿ ಮಾತನಾಡಿದ ಸಿಂಗ್, 'ಯಾವ ಪಕ್ಷದಿಂದ ಸ್ಪರ್ಧಿಸುವೆ ಎಂಬುದನ್ನು ಕೆಲವೇ ದಿನಗಳಲ್ಲಿ ತಿಳಿಸುವೆ. ಕ್ಷೇತ್ರದಲ್ಲಿ ಸ್ಪರ್ಧಿಸುವುದು ಖಚಿತ. ಹ್ಯಾಟ್ರಿಕ್‌ ಗೆಲುವು ದಾಖಲಿಸುವೆ. ಮಾನವ ಧರ್ಮವೇ ನನಗೆ ದೊಡ್ಡ ತತ್ತ್ವವಾಗಿದೆ. ರಾಜಕೀಯ ನಿರ್ಧಾರದಿಂದ ಬಲಿಪಶುವಾಗುವೆ ಎಂಬುದು ನನಗೆ ತಿಳಿದಿದೆ. ಆದರೆ, ಬಲಿಪಶುವಾಗುವುದಕ್ಕಿಂತ ಜಾತ್ಯತೀತವಾದಿಯಾಗಿ ಉಳಿಯುವೆ. ಎಲ್ಲ ಸಮಾಜದವರನ್ನು ಜತೆಗೆ ಕರೆದುಕೊಂಡು ಹೋಗುವೆ. ಜಾತ್ಯತೀತ ತತ್ತ್ವದಲ್ಲಿ ನನಗೆ ನಂಬಿಕೆ ಇದೆ'' ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT