ಸ್ವಾಮೀಜಿ ಶಿಷ್ಯೆ ರಂಜಿತಾ ಸೇರಿದಂತೆ ಐವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೊರಟಿದ್ದಾಗ ಜಿಂದಾಲ್ ಸಮೀಪ ಈ ಘಟನೆ ನಡೆದಿದೆ. ಬೈಕ್ ಸವಾರರು ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದರೂ ಚಾಲಕ ಕಾರು ಓಡಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ. ಅದನ್ನು ನೋಡಿದ್ದ ಸ್ಥಳೀಯರು, ಬೈಕ್ನಲ್ಲಿ ಬೆನ್ನಟ್ಟಿ 8ನೇ ಮೈಲ್ ಬಳಿ ಕಾರು ತಡೆದು ನಿಲ್ಲಿಸಿದ್ದರು. ಚಾಲಕನನ್ನು ಹಿಡಿದು ಥಳಿಸಿದ್ದರು. ಅದೇ ವೇಳೆ ರಂಜಿತಾ, ಮತ್ತೊಂದು ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಹೋದರು ಎಂದು ಪೊಲೀಸರು ತಿಳಿಸಿದರು.