ಶನಿವಾರ ಇಲ್ಲಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧೆಡೆಗಳಲ್ಲಿ ಒಟ್ಟು 150 ಕ್ಷೇತ್ರಗಳಲ್ಲಿ ಹಿಂದೂ ಮಹಾಸಭಾ ಸ್ಪರ್ಧಿಸಲಿದೆ. ಹಿಂದೂಗಳ ಮತ ಮುಖ್ಯವಲ್ಲ ಎಂಬ ರೀತಿಯಲ್ಲಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಕೋಮು ಗಲಭೆಯಲ್ಲಿ ಭಾಗವಹಿಸಿದ ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ಇತ್ತೀಚೆಗೆ ಸರ್ಕಾರ ಹಿಂಪಡೆದುಕೊಂಡಿರುವುದು ಇದಕ್ಕೊಂದು ನಿದರ್ಶನ ಎಂದರು.