ಶಾಸಕ ಎಂ.ಕೆ.ಸೋಮಶೇಖರ್ ಅವರು ಸಮಸ್ಯೆಗೆ ಸಂಬಂಧಿಸಿದ ಎಲ್ಲ ಕಡತಗಳು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳ ಕಚೇರಿ ತಲುಪಿಸಿ, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆದರೂ ವಿಷಯ ನ್ಯಾಯಾಲಯದಲ್ಲಿದೆ ಎಂಬ ಕಾರಣ ನೀಡಿ ಅಧಿಕಾರಿಗಳು ಕೈಚೆಲ್ಲಿದ್ದಾರೆ. ಅವರು ಈ ಹಿಂದೆ ನೀಡಿದ್ದ ಭರವಸೆಯಂತೆ ಸಂಪುಟ ಸಭೆ ಕರೆದು ಚುನಾವಣಾ ನೀತಿ ಸಂಹಿತೆ ಜಾರಿಯಾಯಾಗುವ ಮುನ್ನ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು. ಟ್ರಸ್ಟ್ ಪದಾಧಿಕಾರಿಗಳಾದ ವಿಜಯಪ್ರಕಾಶ್, ಮಂಜುನಾಥ್, ಗಿರೀಶ್, ಉಮೇಶ್, ಪ್ರಶಾಂತ್, ಸಿದ್ಧಾರ್ಥ ಪಾಟೀಲ ಭಾಗವಹಿಸಿದ್ದರು.